Tuesday, June 6, 2023
Homeಇದೀಗ ಬಂದ ತಾಜಾ ಸುದ್ದಿಕೊಚ್ಚಿಯಲ್ಲಿ ಕನ್ನಡ ಪತ್ರಕರ್ತರ ಸಮ್ಮಿಳನ: ಕನ್ನಡ ಸಂಸ್ಕೃತಿ ಉತ್ಸವ ಸಮಾರೋಪ ಸಮಾರಂಭ

ಕೊಚ್ಚಿಯಲ್ಲಿ ಕನ್ನಡ ಪತ್ರಕರ್ತರ ಸಮ್ಮಿಳನ: ಕನ್ನಡ ಸಂಸ್ಕೃತಿ ಉತ್ಸವ ಸಮಾರೋಪ ಸಮಾರಂಭ

ಕೊಚ್ಚಿಯಲ್ಲಿ ಕನ್ನಡ ಪತ್ರಕರ್ತರ ಸಮ್ಮಿಳನ

ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಕೇರಳ:
ಕೊಚ್ಚಿನ್ ನಲ್ಲಿ ಎರಡು ದಿನಗಳ ಕಾಲ ನಡೆದ ಕನ್ನಡ ಸಂಸ್ಕೃತಿ ಉತ್ಸವ ಸಂಭ್ರಮ‌ ಸಡಗರದಿಂದ ಸಂಪನ್ನಗೊಂಡಿತು.

ಕೊಚ್ಚಿನ್ ಕನ್ನಡ ಸಂಘ, ಕಾಸರಗೋಡು ಕನ್ನಡ ಪತ್ರಕರ್ತರ ಸಂಘ, ಗಡಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೆಯುಡಬ್ಲ್ಯೂಜೆ ಸಂಯುಕ್ತವಾಗಿ ಏರ್ಪಡಿಸಿದ್ದ ಕನ್ನಡ ಸಂಸ್ಕೃತಿ ಉತ್ಸವ ಸಮಾರೋಪ ಸಮಾರಂಭದಲ್ಲಿ ಸಾಧಕ ಪತ್ರಕರ್ತರಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಭಾಪತಿ, ಹಲವು ಮಾಧ್ಯಮದಲ್ಲಿರುವ ಅನೇಕರನ್ನು ಈ ವೇದಿಕೆಯಲ್ಲಿ ಗೌರವಿಸುತ್ತಿರುವುದು ಅಭಿಮಾನದ ಸಂಗತಿ. ಪ್ರಶಸ್ತಿಗಳು ನಮ್ಮ ಜವಾಬ್ದಾರಿ ಹೆಚ್ಚಿಸುತ್ತವೆ. ಮುಂದೆ ಹೊಣೆಗಾರಿಕೆಯಿಂದ ಕೆಲಸ ಮಾಡಲು ನೀವು ಕಂಕಣಬದ್ಧರಾಗಬೇಕು ಎಂದರು.

ಸಮಾಜದಲ್ಲಿ ಪತ್ರಕರ್ತರಿಗೆ ಗುರುವಿನ ಸ್ಥಾನ ಇದೆ. ರಾಜಕಾರಣಿಗಳು ಕೆಟ್ಟರೆ ನೀವು ತಿದ್ದಬೇಕು. ಲೋಪಗಳಿಗೆ ಕನ್ನಡಿ ಹಿಡಿದು ಸರಿಪಡಿಸುವ ಕೆಲಸ ಆಗಬೇಕು. ಆಗ ಮಾತ್ರ ಸಮಾಜ ಆರೋಗ್ಯಕರವಾಗಿ ಇರಲು ಸಾಧ್ಯವಿದೆ ಎಂದರು.

ಈ ಕಾರ್ಯಕ್ರಮಕ್ಕೆ ಕೆಯುಡಬ್ಲ್ಯೂಜೆ ಸಾಥ್ ನೀಡುವ ಮೂಲಕ ತನ್ನ ಬಳಗದ ಎಲ್ಲರನ್ನೂ ಇಲ್ಲಿಗೆ ಕರೆ ತಂದಿರುವುದು ವಿಶೇಷ. ಹೊರನಾಡಿನಲ್ಲಿ ಈ ರೀತಿಯಲ್ಲಿ ಎಲ್ಲರನ್ನೂ ಒಳಗೊಳ್ಳುವ ಕಾರ್ಯಕ್ರಮ ಆಗಬೇಕು ಎಂದರು.
ಗಡಿ ಆಚೆಗೂ ಇರುವ ಕನ್ನಡಿರ ಬಗ್ಗೆ ವಿಶೇಷ ಕಾರ್ಯಕ್ರಮ ರೂಪಿಸಿ ನೆರವು ನೀಡುವಂತೆ ಸರ್ಕಾರದ ಗಮನ ಸೆಳೆಯುವುದಾಗಿ ಹೊರಟ್ಟಿ ತಿಳಿಸಿದರು.
ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ, ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ,
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಮಾತನಾಡಿ, ಕನ್ನಡ ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಕೊಚ್ಚಿನ್ ಕನ್ನಡ ಸಂಘದ ಅಧ್ಯಕ್ಷ ಶ್ರೀನಿವಾಸ ರಾವ್, ಕಾಸರಗೋಡು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಮತ್ತಿತರರು ಹಾಜರಿದ್ದರು.

ಪುಸ್ತಕ ಬಿಡುಗಡೆ: ಸಾಹಿತಿ ಉದಿನೂರು ಮೊಹಮ್ಮದ್ ಕುಂಇ ಬರೆದಿರುವ
ಕನ್ನಡ ಸಾಹಿತ್ಯದಲ್ಲಿ ಮುಸ್ಲಿಂ ಸಂವೇದನೆ ಕೃತಿಯನ್ನು ಸಮಾರಂಭದಲ್ಲಿ ಬಿಡುಗಡೆ ಮಾಡಲಾಯಿತು.

ಮೀನುಗಾರಿಕಾ ಪ್ರಶಸ್ತಿಗೆ ಚಾಲನೆ:
ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ವಿನಾಯಕ ಗಂಗೊಳ್ಳಿ ಅವರು ದೈವ ನರ್ತಕ ಕೀರ್ತಿ ಶೇಷ ಶ್ರೀ ದೇವಯ್ಯ ಖಾರ್ವಿ ಗಂಗೊಳ್ಳಿ ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಗೆ ಚಾಲನೆ ನೀಡಲಾಯಿತು.

ದತ್ತು ನಿಧಿ ಪುರಸ್ಕೃತರು
ಸಮಾರಂಭದಲ್ಲಿ ಪಬ್ಲಿಕ್ ಟಿವಿಯ ಬಬ್ರುದ್ದೀನ್ ಮಾಣಿ, ಸಂಯುಕ್ತ ಕರ್ನಾಟಕದ ಕೀರ್ತಿ ಶೇಖರ್, ಪ್ರಜಾವಾಣಿಯ ರಾಜೇಶ್ ರೈ ಚೆಟ್ಲ,
ಹಿರಿಯ ಪತ್ರಕರ್ತರಾದ
ಅಜ್ಜಮಾಡ ರಮೇಶ್ ಕುಟ್ಟಪ್ಪ, ಯು.ಕೆ ಕುಮಾರ್ ನಾಥ್, ಶ್ರೀಜ ವಿ.ಎನ್., ರೋನ್ಸ್ ಬಂಟ್ವಾಳ, ದೇವದಾಸ ಪಾರೆಕಟ್ಟೆ, ನಟರಾಜ ಮಲ್ಪೆ, ವಿಕ್ರಂ ಕಾಂತಿಕೆರೆ, ದಯಾಶಂಕರ‌ಚೌಟ, ಪ್ರದೀಪ ಬೇಕಲ, ಹಂಝ ಮಲಾರ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮ:
ಕೊಚ್ಚಿನ್ ಕನ್ನಡ ಸಂಘ, ಕಾಸರಗೋಡು ಕನ್ನಡ ಸಂಘ ಸೇರಿದಂತೆ ಹಲವು ತಂಡಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ಮೆರಗು ತಂದವು. ಕೊಚ್ಚಿನ್ ನಲ್ಲಿ ಎರಡು ದಿನ ಕನ್ನಡ ಕಂಪನ್ನು ಹರಡುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.

RELATED ARTICLES
- Advertisment -
Google search engine

Most Popular

Recent Comments